ರಾಜ್ಯ

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ವುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ KHB ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖಿಸಿದರು.

ಖಾಲಿ ಇರುವ KHB ನಿವೇಶನಗಳ ಮಾರಾಟದಿಂದ KHB ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ kHB ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದರು.

ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷರಾದ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

33 mins ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

2 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

4 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

5 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

6 hours ago