ರಾಜ್ಯ

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ವುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ KHB ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖಿಸಿದರು.

ಖಾಲಿ ಇರುವ KHB ನಿವೇಶನಗಳ ಮಾರಾಟದಿಂದ KHB ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ kHB ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದರು.

ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷರಾದ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

53 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago