ರಾಜ್ಯ

ಹಾಲಿನ ದರ ಹೆಚ್ಚಳಕ್ಕೆ ಮಣಿಯದ ಸಿಎಂ : ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರವೇ ಬಹುನಿರಿಕ್ಷೀತ ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕೂಟಗಳಿಗೆ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಸೋಮನಾಥ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಕೆ, ವೆಂಕಟೇಶ್ , ಕೆಎಂಎಪ್ ಅಧ್ಯಕ್ಷ ಭೀಮಾ ನಾಯ್ಕ್, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು.

ಇದೇ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಒಕ್ಕೂಟಗಳ ಬೇಡಿಕೆಯಂತೆ ಹಾಲಿನ ದರ ಪರಿಷ್ಕರಣೆ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ಆಭಯ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಹೇಳಿದರು.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳು ಮಾಡಿಕೊಂಡ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಲಿಲ್ಲ.

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ.ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು  ಎಂದು ಪ್ರತಿಪಾದಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago