ರಾಜ್ಯ

ಮುಡಾ ಹಗರಣದಲ್ಲಿ ಸಿಎಂ, ಮತ್ತವರ ಕುಟುಂಬದ ಪಾತ್ರವಿದೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

“50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” ಹಾಗೂ “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

10 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

10 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

11 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

12 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

12 hours ago