ರಾಜ್ಯ

ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿಗೆ ಸಿಎಂ ಭರವಸೆ

ಬೆಂಗಳೂರು: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಭರವಸೆ ನೀಡಿದ್ದಾರೆ.

1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿದೆ. ಆಡಿಟ್ ವರ್ಗೀಕರಣದಲ್ಲಿ ನಮ್ಮ ಸಂಸ್ಥೆ ‘ಎ’ ಶ್ರೇಣಿ ಪಡೆದಿರುವ ಸಂಸ್ಥೆ. ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ನಿರಂತರ ಏಳು ದಶಕಗಳಿಂದ ನಮ್ಮ ಪತ್ರಕರ್ತರ ಸಹಕಾರ ಸಂಘ ಸೇವೆ ಸಲ್ಲಿಸುತ್ತಿದೆ.

ಪತ್ರಕರ್ತರ ಸಂಘದ ಸದಸ್ಯರಿಂದ ಆರೋಗ್ಯದ ನೆರವಿನ ಬೇಡಿಕೆ ದಿನೇದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಪತ್ರಕರ್ತರ ಆರೋಗ್ಯದ ಅನುಕೂಲಕ್ಕಾಗಿ ಆರ್ಥಿಕ ನೆರವು ಬೇಕಿದೆ. ವೈದ್ಯಕೀಯ ನೆರವಿಗೆ ರಾಜ್ಯ ಸರ್ಕಾರದಿಂದ ಸುಮಾರು 5 ಕೋಟಿ ರೂ. ಅನುದಾನ ನೀಡಬೇಕು ಎಂದು ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಘದ ಶ್ರೇಯೋಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಇದರ ಜೊತೆಗೆ ಕೆಲವು ಹಿರಿಯ ಪತ್ರಕರ್ತರು ಸಂಘದಲ್ಲಿ ಸಾಲ ಪಡೆದಿದ್ದು, ಕೊರೋನಾ ಸಮಯದಲ್ಲಿ ಹಾಗೂ ಆನಂತರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಕೊರೋನಾ ಆರ್ಥಿಕ ಸಂಕಷ್ಟದಿಂದ ನಿಗಧಿತ ಸಮಯಕ್ಕೆ ಸಾಲ ಮರು ಪಾವತಿ ಮಾಡದೆ ಸುಸ್ತಿದಾರರಾಗಿದ್ದಾರೆ. ಹೀಗಾಗಿ ಸಂಸ್ಥೆಗೆ ಆರ್ಥಿಕ ನೆರವು ತೀರಾ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರ ಸಹಕಾರ ಸಂಘಕ್ಕೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳನ್ನು ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಸಹಕಾರ ಸಂಘಕ್ಕೆ ನೆರವು ನೀಡುವ ಭರವಸೆ ನೀಡಿದರು.

ನಿಗಮಗಳ ನೇಮಕದಲ್ಲಿ ಸಂಸ್ಥೆಯನ್ನೂ ಪರಿಗಣಿಸಿ
ಮಾಧ್ಯಮಕ್ಕೆ ಸಂಬಂಧಿಸಿದ ಮಿಗಮ ಮಂಡಳಿ ಅಥವಾ ಅಕಾಡೆಮಿಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘವನ್ನೂ ಪರಿಗಣಿಸಬೇಕು. ಸಹಕಾರ ಸಂಘದ ಪ್ರತಿನಿಧಿಗಳನ್ನು ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿನಂತಿಸಿಕೊಳ್ಳಲಾಯಿತು.

ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯರ್ಶಿ ಕೆ.ವಿ.ಪ್ರಭಾಕರ್, ಆಪ್ತ ಸಹಾಯಕರಾದ ಕೆ. ಗಿರೀಶ್ ಇದ್ದರು. ನಿಯೋಗದಲ್ಲಿ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್ ಬಿ.ಎಸ್. ನಿರ್ದೇಶಕರಾದ ರಮೇಶ್ ಹಿರೇಜಂಬೂರು, ಸೋಮಶೇಖರ್ ಕೆ.ಎಸ್.( ಸೋಮಣ್ಣ ) ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

4 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

5 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

5 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

11 hours ago