ರಾಜ್ಯ

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆ ಕೈಗೊಂಡು ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣ ಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

AddThis Website Tools
ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

3 hours ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

3 hours ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

4 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

4 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

5 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

5 hours ago