ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಆರ್ ಅಶೋಕ್, ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಬೇಕು. ಸದನದ ಒಳಗೂ ಹೋರಾಟ ಮಾಡುತ್ತೇವೆ. ಸಿಎಂ ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್ ಆಗೋಕೆ ನಿವೃತ್ತ ಜಡ್ಜ್ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಾಂಗ ತನಿಖೆ ಆಗಬೇಕು. ಮುಡಾ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಅವರ ಹಣ ಕಾಂಗ್ರೆಸ್ ಲೂಟಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…