ರಾಜ್ಯ

ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳ ಪ್ರಕರಣಗಳು 1 ವರ್ಷದಲ್ಲಿ ಶೇ.36ರಷ್ಟು ಇತ್ಯರ್ಥ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜನವರಿ.29) ಕೃಷ್ಣಾದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿಯಾಗಿದ್ದು, 10 ವರ್ಷ ಮತ್ತು 5 ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ ಎಂದರು. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ ಎಂದು ದಾಖಲೆ ಸಮೇತ ಮಾಹಿತ ನೀಡಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಈ ಪ್ರಕರಣಗಳಲ್ಲಿ ಬರೀ ಕ್ವಾಟಿಟಿ ವಿಲೇವಾರಿ ಆದರೆ ಸಾಲದು, ಕ್ವಾಲಿಟಿ ವಿಲೇವಾರಿ ಪ್ರಕರಣಗಳು ಇತ್ಯರ್ಥವಾದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್‌ ಬೀಳುತ್ತದೆ. ಈ ದಿಕ್ಕಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಅಲ್ಲದೇ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದ್ದು, ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಬೇಕು ಎಂದು ಸೂಚಿಸಿದರು.

ಇನ್ನೂ ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಅನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕ. ಈ ಬಗ್ಗೆ ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು. ಅಲ್ಲದೇ ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ಇರಬಾರದು ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು.

ಬಾಕಿ ಉಳಿದಿರುವ ಪ್ರಕರಣಗಳನ್ನು ತಹಶೀಲ್ದಾರ್‌ ಅವರು ತಮ್ಮ ವ್ಯಾಪ್ತಿಯಲ್ಲಿರುವ ಪ್ರಕರಣಗಳನ್ನು ಮೂರು ತಿಂಗಳೊಳಗಾಗಿ ವಿಲೇವಾರಿ ಮಾಡಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಹೀಗಾಗಿ ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

14 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

19 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

23 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

35 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

40 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

46 mins ago