ರಾಜ್ಯ

ಕರ್ನಾಟಕ ಬಜೆಟ್‌| ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ ಮಾಡಿದ ಅವರು, ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಅನುಗ್ರಹ ಯೋಜನೆಯ ಪರಿಹಾರ ಮೊತ್ತ ಏರಿಕೆ ಮಾಡಲಾಗಿದೆ. ಅಂತೆಯೇ ಮುಖ್ಯವಾಗಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ತರಲಾಗುವುದು ಎಂದರು.

ಈ ಯೋಜನೆಯ ಮೂಲಕ ಹಸು, ಎಮ್ಮೆ ಹಾಗೂ ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾದ ಮೊತ್ತವನ್ನು 10,000 ರಿಂದ 15,000 ರೂ.ಗಳಿಗೆ ಕುರಿ ಮತ್ತು ಮೇಕೆಗಳಿಗೆ ನೀಡುತ್ತಿರುವ ಮೊತ್ತವನ್ನು 5,000 ದಿಂದ 7,500 ರೂ.ಗಳಿಗೆ ಹಾಗೂ 3-4 ತಿಂಗಳ ಕುರಿ, ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ನಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

50 ಹೊಸ ಪಶು ಚಿಕಿತ್ಸಾಲಯ ಆರಂಭ

ಕಳೆದ ಎರಡು ವರ್ಷಗಳಲ್ಲಿ 60 ನೂತನ ಪಶು ಚಿಕಿತ್ಸಾಲಯಗಳ ಕಾರ್ಯಾರಂಭಗೊಳಿಸಲಾಗಿದೆ. ಆದರೆ ಇದೀಗ ಈ ಬಾರಿಯ ಬಜೆಟ್‌ನಲ್ಲಿ 50 ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು. ಅಲ್ಲದೇ ನಬಾರ್ಡ್‌ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ಹೊಸ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ವಲಸೆ ಕುರಿಗಾರರಿಗೆ ತರಬೇತಿ

ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಹಾಗೂ ನೈಸರ್ಗಿಕ ವಿಕೋಪಗಳ ವೇಳೆ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಕುರಿಗಾರರಿಗೆ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ತರಬೇತಿ ನೀಡಲಾಗುವುದು. ಜೊತೆಗೆ ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ಬಳಿಕ ನಂದಿನಿ ಬ್ರ್ಯಾಂಡ್‌ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. ಹೀಗಾಗಿ 2024-25ನೇ ಸಾಲಿನಲ್ಲಿ ಒಂದು ಕೋಟಿಗೂ ಹೆಚ್ಚು ಲೀಟರ್‌ ಹಾಲನ್ನು ಶೇಖರಿಸಲಾಗಿದೆ ಎಂದರು.

ಮೇವಿನ ಮರಗಳ ನೆಡುತೋಪು ಅಭಿವೃದ್ಧಿ

ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಅಮೃತ್‌ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ಪಡೆಯಲು ಮತ್ತು ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು. ಅಲ್ಲದೇ ರಾಜ್ಯದ ಹೆಮ್ಮೆಯ ದೇಶಿ ದನಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಮತ್ತು ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 2 ಕೋಟಿ ನೀಡಲಾಗುವುದು ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago