ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವುದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ತಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ.
ಈ ಸಂಬಂಧ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸದ್ಯ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ನಾನು ಸಚಿವ. ಸಚಿವ ನಾಗೇಂದ್ರ ರಾಜೀನಾಮೆ ಬಳಿಕ ಈ ಖಾತೆಯನ್ನು ನಾನೇ ಉಳಿಸಿಕೊಂಡಿದ್ದೇನೆ. ನಿಗಮದಲ್ಲಿ ಅಕ್ರಮ ನಡೆದಿದೆ, ಆದರೆ ಯಾರು ಮಾಡಿದ್ದು, ಇದಕ್ಕೆ ಯಾರು ಜವಾಬ್ದಾರಿ ಎಂಬೆಲ್ಲಾ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಿಗಮದ ಹಣಕಾಸು ಜವಾಬ್ದಾರಿ ನಿಭಾಯಿಸುವುದು ನಿಗಮದ ಎಂಡಿ ಕೆಲಸವಾಗಿದೆ. ಹಣದ ಸಂಪೂರ್ಣ ಜವಾಬ್ದಾರಿ ಎಂಡಿ ಅವರದ್ದೇ ಆಗಿರುತ್ತದೆ. ಎಂಡಿ ನಿಗಮದ ಹೆಡ್ ಆಗಿರುತ್ತಾರೆ. ಮಿನಿಸ್ಟರ್ ಕೇವಲ ಪಾಲಿಸಿ ಮೇಕರ್ಸ್ ಆಗಿರುತ್ತಾರೆ. ಇದಕ್ಕೆ ಮಿನಿಸ್ಟರ್ ನಾಗೇಂದ್ರ ಹಾಗೂ ಅಧ್ಯಕ್ಷರಾಗಿ ದದ್ದಲ್ ಅವರನ್ನು ನೇಮಕ ಮಾಡಿದ್ದು, ಇವರ ಅವಧಿಯಲ್ಲಿ ಅಕ್ರವಾಗಿದೆ ಎಂದು ಹೇಳಿದರು.
ವಸಂತ ನಗರದ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಿಗಮದ ಹಣವನ್ನು ಇಡಲಾಗಿತ್ತು. ಈ ಎಲ್ಲಾ ಹಣವನ್ನು ವ್ಯವಸ್ಥಾಪಕಿ ಶೋಭನಾ ಎಂಬುವವರು ಎಂ.ಜಿ ರಸ್ತೆಯ ಬ್ರ್ಯಾಂಚ್ಗೆ ಬೇರೆ ಬೇರೆ ಕಡೆಗಳಿಂದ ಸೇರಿದಂತೆ ಒಟ್ಟು 187 ಕೋ. 33 ಲಕ್ಷ ಎಲ್ಲಾ ಹಣವನ್ನು ವರ್ಗಾಯಿಸಿದ್ದಾರೆ. ಈ ಶಾಖೆಯಿಂದ 89.63 ಕೋಟಿ ರೂ 18 ಅಕೌಂಟ್ ಮೂಲಕ ತೆಲಂಗಾಣಕ್ಕೆ ವರ್ಗಾವಣೆಯಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಮೇ.26 ರಂದು ನಿಗದಮ ಅಧೀಕ್ಷಕ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಡೆತ್ ನೋಟ್ನಲ್ಲಿ ಪರಶುರಾಮ್, ಪದ್ಮನಾಭ್, ಸ್ಮಿತಾ ಹೆಸರನ್ನು ಉಲ್ಲೇಖಿಸಿ ಅಕ್ರಮಕ್ಕೆ ಹೊಣೆ ಎಂದು ಬರೆದಿದ್ದಾರೆ. ಈ ಯಾವುದನ್ನು ಆರ್. ಅಶೋಕ್ ಸದನದಲ್ಲಿ ಪ್ರಸ್ತಾಪವೇ ಮಾಡಲಿಲ್ಲ ಎಂದು ತಿರುಗೇಟು ನೀಡಿದರು.
ಜತೆಗೆ ಈ ಪ್ರಕರಣವನ್ನು ಎಸ್ಐಟಿಗೆ ವಹಿಸಲಾಗಿದೆ. ಸಿಬಿಐ ಹಾಗೂ ಇಡಿ ಸ್ವಯಂ ಪ್ರೇರಿತವಾಗಿ ತನಿಖೆ ಮಾಡುತ್ತಿವೆ. ಈಗಾಗಲೇ ದದ್ದಲ್ ಹಾಗೂ ಸಚಿವ ನಾಗೇಂದ್ರ ಅವರನ್ನು ಇಡಿ ಬಂಧಿಸಿದ್ದು ವಿಚಾರಣೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…