ರಾಜ್ಯ

CWMA ಮುಂದೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಸಂಬಂಧ CWMC ಆದೇಶ ವಿರೋಧಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಜು.14) ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.

ಜು.11 ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1ಟಿಎಂಸಿ ಯಂತೆ 20ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ.

ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ. ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೇವೆ.

ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಮಾಹಿತಿ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago