ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು.
ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ ಎಂದು ಸಿದ್ದರಾಮಯ್ಯ ಸಿಟ್ಟಾದರು.
ಅಕ್ಟೋಬರ್ 2023ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ ಎಂದರು.
ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದು ಸಿಎಂ ಹೇಳಿ ತೆರಳಿದರು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…