ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು.
ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ ಎಂದು ಸಿದ್ದರಾಮಯ್ಯ ಸಿಟ್ಟಾದರು.
ಅಕ್ಟೋಬರ್ 2023ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ ಎಂದರು.
ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದು ಸಿಎಂ ಹೇಳಿ ತೆರಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…