ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು.
ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ ಎಂದು ಸಿದ್ದರಾಮಯ್ಯ ಸಿಟ್ಟಾದರು.
ಅಕ್ಟೋಬರ್ 2023ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ ಎಂದರು.
ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದು ಸಿಎಂ ಹೇಳಿ ತೆರಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…