Categories: ರಾಜ್ಯ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಎಲ್ಲಾ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಪುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್‌ ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ. ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ. ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು  ಹೇಳಿದರು.

ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಮಾತನಾಡಿ, ಬೆಂಗಳೂರಿನಲ್ಲಿ ಹಲವು ಬ್ರಿಟಿಷ್‌ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 15ಬ್ರಿಟಿಷ್‌ ಕಂಪೆನಿಗಳು ಭಾಗವಹಿಸುತ್ತಿವೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮತ್ತು ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಬ್ರಿಟನ್‌ನ ಹಲವು ನಿಯೋಗಗಳು ಭಾಗವಹಿಸಲಿವೆ ಎಂದರು.

ಪ್ರಸ್ತುತ ಕರ್ನಾಟಕದ ಸರ್ಕಾರಿ ಕಾಲೇಜುಗಳ 30 ವಿದ್ಯಾರ್ಥಿಗಳು 15 ದಿನಗಳ ಅಕಾಡೆಮಿಕ್‌ ಅಧ್ಯಯನದ ಮೇಲೆ ಲಂಡನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬ್ರಿಟಿಷ್‌ ಹೈಕಮಿಷನ್ ಮತ್ತು ಕರ್ನಾಟಕ ಜಂಟಿ ಸಹಭಾಗಿತ್ವದಲ್ಲಿ ಸ್ಕಾಲರ್‌ಶಿಪ್‌ ಒದಗಿಸುವ ಪರಸ್ಪರ ಒಡಂಬಡಿಕೆ ರೂಪಿಸಲಾಗಿದೆ. ಇದರನ್ವಯ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಹೆಣ್ಣು ಮಕ್ಕಳಿಗೆ ಯುಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್‌ಶಿಪ್‌ ಒದಗಿಸಲಾಗುವುದು. ಮೂರು ವರ್ಷಗಳ ಒಡಂಬಡಿಕೆ ಇದಾಗಿದ್ದು, ಈ ವರ್ಷ 15 ಮಂದಿಗೆ ಸ್ಕಾಲರ್‌ಶಿಪ್‌ ಒದಗಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

9 hours ago