Categories: ರಾಜ್ಯ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಎಲ್ಲಾ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಪುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್‌ ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ. ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ. ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು  ಹೇಳಿದರು.

ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಮಾತನಾಡಿ, ಬೆಂಗಳೂರಿನಲ್ಲಿ ಹಲವು ಬ್ರಿಟಿಷ್‌ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 15ಬ್ರಿಟಿಷ್‌ ಕಂಪೆನಿಗಳು ಭಾಗವಹಿಸುತ್ತಿವೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮತ್ತು ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಬ್ರಿಟನ್‌ನ ಹಲವು ನಿಯೋಗಗಳು ಭಾಗವಹಿಸಲಿವೆ ಎಂದರು.

ಪ್ರಸ್ತುತ ಕರ್ನಾಟಕದ ಸರ್ಕಾರಿ ಕಾಲೇಜುಗಳ 30 ವಿದ್ಯಾರ್ಥಿಗಳು 15 ದಿನಗಳ ಅಕಾಡೆಮಿಕ್‌ ಅಧ್ಯಯನದ ಮೇಲೆ ಲಂಡನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬ್ರಿಟಿಷ್‌ ಹೈಕಮಿಷನ್ ಮತ್ತು ಕರ್ನಾಟಕ ಜಂಟಿ ಸಹಭಾಗಿತ್ವದಲ್ಲಿ ಸ್ಕಾಲರ್‌ಶಿಪ್‌ ಒದಗಿಸುವ ಪರಸ್ಪರ ಒಡಂಬಡಿಕೆ ರೂಪಿಸಲಾಗಿದೆ. ಇದರನ್ವಯ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಹೆಣ್ಣು ಮಕ್ಕಳಿಗೆ ಯುಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್‌ಶಿಪ್‌ ಒದಗಿಸಲಾಗುವುದು. ಮೂರು ವರ್ಷಗಳ ಒಡಂಬಡಿಕೆ ಇದಾಗಿದ್ದು, ಈ ವರ್ಷ 15 ಮಂದಿಗೆ ಸ್ಕಾಲರ್‌ಶಿಪ್‌ ಒದಗಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago