Categories: ರಾಜ್ಯ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಎಲ್ಲಾ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಪುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್‌ ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ. ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ. ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು  ಹೇಳಿದರು.

ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಮಾತನಾಡಿ, ಬೆಂಗಳೂರಿನಲ್ಲಿ ಹಲವು ಬ್ರಿಟಿಷ್‌ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 15ಬ್ರಿಟಿಷ್‌ ಕಂಪೆನಿಗಳು ಭಾಗವಹಿಸುತ್ತಿವೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮತ್ತು ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಬ್ರಿಟನ್‌ನ ಹಲವು ನಿಯೋಗಗಳು ಭಾಗವಹಿಸಲಿವೆ ಎಂದರು.

ಪ್ರಸ್ತುತ ಕರ್ನಾಟಕದ ಸರ್ಕಾರಿ ಕಾಲೇಜುಗಳ 30 ವಿದ್ಯಾರ್ಥಿಗಳು 15 ದಿನಗಳ ಅಕಾಡೆಮಿಕ್‌ ಅಧ್ಯಯನದ ಮೇಲೆ ಲಂಡನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬ್ರಿಟಿಷ್‌ ಹೈಕಮಿಷನ್ ಮತ್ತು ಕರ್ನಾಟಕ ಜಂಟಿ ಸಹಭಾಗಿತ್ವದಲ್ಲಿ ಸ್ಕಾಲರ್‌ಶಿಪ್‌ ಒದಗಿಸುವ ಪರಸ್ಪರ ಒಡಂಬಡಿಕೆ ರೂಪಿಸಲಾಗಿದೆ. ಇದರನ್ವಯ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಹೆಣ್ಣು ಮಕ್ಕಳಿಗೆ ಯುಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್‌ಶಿಪ್‌ ಒದಗಿಸಲಾಗುವುದು. ಮೂರು ವರ್ಷಗಳ ಒಡಂಬಡಿಕೆ ಇದಾಗಿದ್ದು, ಈ ವರ್ಷ 15 ಮಂದಿಗೆ ಸ್ಕಾಲರ್‌ಶಿಪ್‌ ಒದಗಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago