ರಾಜ್ಯ

ಹಿರಿಯ ನಟಿ ಸರೋಜಾದೇವಿ ನಿಧನಕ್ಕೆ ಸಿಎಂ ಹಾಗೂ ಡಿಸಿಎಂ ಸಂತಾಪ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ ನಟಿ ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಹಲವು ಚಿತ್ರಗಳಲ್ಲಿ ನಟಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.


ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಹ ಟ್ವೀಟ್‌ ಮಾಡಿದ್ದು, ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

17 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

21 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

23 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

26 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

28 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago