ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಾನ್ ಚಾಲೀಸ್ ಪಠಾಣ್ ಮಾಡಿದವರ ಮೇಲೆ ಎಫ್ಐಆರ್ ಹಾಕುತ್ತೀರಿ. ಇದು ಸರಿಯಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಯಾರು ಬೇಕಾದರೂ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ನೀವು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದೀರಾ ಅಥವಾ ಇದನ್ನು ಇಸ್ಲಾಮಿಕ್ ರಾಷ್ಟ್ರ ಅಂದ್ಕೊಂಡಿದ್ದೀರಾ ಎಂದ ಅವರು ಸಿಎಂ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ. ಇದು ವೋಟ್ಬ್ಯಾಂಕ್ ರಾಜಕಾರಣ ಎಂದರು.
ನನ್ನ ಮಕ್ಕಳು ರಾಹುಲ್ ಗಾಂಧಿ ತರ ಆಗಬೇಕೆಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಹಾಗೆ ಹೇಳದೆ ಹೋದರೇ ಅವರ ನೌಕರಿ ಹೋಗುತ್ತೆ. 75 ವರ್ಷ ಇವರು ಸುಳ್ಳು ಹೇಳಿದ್ದಾರೆ. ನೀವು ಸತ್ಯಹರಿಶ್ಚಂದ್ರರಾಗಿದ್ದರೆ ಜನರು ಯಾಕೆ ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದರು. ನೀವು ಹುಚ್ಚರ ರೀತಿ ಮಾತಾಡಿದ್ದಕ್ಕೆ ಜನ ಸೋಲಿಸಿದ್ದಾರೆ. ಕಾಂಗ್ರೆಸ್ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ಫಾರಿನ್ಗೆ ಹೋಗುತ್ತಾರೆ ಎಂದು ಕಿಡಿ ಕಾರಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…