ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಾನ್ ಚಾಲೀಸ್ ಪಠಾಣ್ ಮಾಡಿದವರ ಮೇಲೆ ಎಫ್ಐಆರ್ ಹಾಕುತ್ತೀರಿ. ಇದು ಸರಿಯಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಯಾರು ಬೇಕಾದರೂ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ನೀವು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದೀರಾ ಅಥವಾ ಇದನ್ನು ಇಸ್ಲಾಮಿಕ್ ರಾಷ್ಟ್ರ ಅಂದ್ಕೊಂಡಿದ್ದೀರಾ ಎಂದ ಅವರು ಸಿಎಂ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ. ಇದು ವೋಟ್ಬ್ಯಾಂಕ್ ರಾಜಕಾರಣ ಎಂದರು.
ನನ್ನ ಮಕ್ಕಳು ರಾಹುಲ್ ಗಾಂಧಿ ತರ ಆಗಬೇಕೆಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಹಾಗೆ ಹೇಳದೆ ಹೋದರೇ ಅವರ ನೌಕರಿ ಹೋಗುತ್ತೆ. 75 ವರ್ಷ ಇವರು ಸುಳ್ಳು ಹೇಳಿದ್ದಾರೆ. ನೀವು ಸತ್ಯಹರಿಶ್ಚಂದ್ರರಾಗಿದ್ದರೆ ಜನರು ಯಾಕೆ ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದರು. ನೀವು ಹುಚ್ಚರ ರೀತಿ ಮಾತಾಡಿದ್ದಕ್ಕೆ ಜನ ಸೋಲಿಸಿದ್ದಾರೆ. ಕಾಂಗ್ರೆಸ್ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ಫಾರಿನ್ಗೆ ಹೋಗುತ್ತಾರೆ ಎಂದು ಕಿಡಿ ಕಾರಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…