ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಹೊರಡಿಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೌನ ಮುರಿದಿದ್ದು, ವಿಪಕ್ಷ ನಾಯಕ ಅಶೋಕ್ ವಿರುದ್ಧ ಗುಡುಗಿದ್ದಾರೆ. ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಬೇಕು. ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಎಂದು ಛಾಡಿಸಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ? ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಆರ್. ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.
ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.
ಆರ್. ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಬಿಎಸ್ವೈ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.
ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.
ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ”. ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
https://x.com/siddaramaiah/status/1825427320393392561?t=wG6qEUc2ZB-igYEaosJIzQ&s=08
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…