ರಾಜ್ಯ

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.30) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ನಮ್ಮ ಸರ್ಕಾರದ ವತಿಯಿಂದ ನಾವು ಎಕ್ಸ್‌ಪೋರ್ಟ್‌ ಕಮಿಟಿ ರಚಿಸಿದ್ದೇವೆ. ಅಲ್ಲದೇ ರಾಜೀವ್‌ ಮತ್ತು ವಾಣಿವಿಲಾಸ ಆಸ್ಪತ್ರೆ ವೈದ್ಯಾಧಿಕಾರಿಗಳ ಕಮಿಟಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಭವಿಸಲು ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಬಳಕೆಯಾಗಿರುವುದು ಕಾರಣವಾಗಿದೆ. ಇದನ್ನು ಸರಬರಾಜು ಮಾಡಿದವರು ಪಶ್ಚಿಮ ಬಂಗಾಳದ ಫಾರ್ಮಾಸುಟಿಕಲ್ಸ್‌ನವರಾಗಿದ್ದಾರೆ. ಬಳಿಕ ಅದನ್ನು ಡ್ರಗ್‌ ಕಂಟ್ರೋಲರ್‌ ಸರಬರಾಜು ಮಾಡುತ್ತಾರೆ. ಹೀಗಾಗಿ ತಕ್ಷಣವೇ ಈ ಡ್ರಗ್ಸ್‌ ಕಂಟ್ರೋಲರ್‌ರನ್ನು ಅಮಾನತು ಆದೇಶ ನೀಡಿದ್ದು, ಆ ಕಂಪೆನಿಯನ್ನು ಬ್ಯ್ಲಾಕ್‌ಲಿಸ್ಟ್ಗೆ ಹಾಕುವಂತೆ ಹೇಳಿದ್ದೇನೆ. ಅಲ್ಲದೇ ಇಂತಹ  ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚಿಸಿದ್ದೇನೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

35 mins ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

42 mins ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

51 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

1 hour ago