ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ನ.30) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ನಮ್ಮ ಸರ್ಕಾರದ ವತಿಯಿಂದ ನಾವು ಎಕ್ಸ್ಪೋರ್ಟ್ ಕಮಿಟಿ ರಚಿಸಿದ್ದೇವೆ. ಅಲ್ಲದೇ ರಾಜೀವ್ ಮತ್ತು ವಾಣಿವಿಲಾಸ ಆಸ್ಪತ್ರೆ ವೈದ್ಯಾಧಿಕಾರಿಗಳ ಕಮಿಟಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಈ ಪ್ರಕರಣ ಸಂಭವಿಸಲು ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಯಾಗಿರುವುದು ಕಾರಣವಾಗಿದೆ. ಇದನ್ನು ಸರಬರಾಜು ಮಾಡಿದವರು ಪಶ್ಚಿಮ ಬಂಗಾಳದ ಫಾರ್ಮಾಸುಟಿಕಲ್ಸ್ನವರಾಗಿದ್ದಾರೆ. ಬಳಿಕ ಅದನ್ನು ಡ್ರಗ್ ಕಂಟ್ರೋಲರ್ ಸರಬರಾಜು ಮಾಡುತ್ತಾರೆ. ಹೀಗಾಗಿ ತಕ್ಷಣವೇ ಈ ಡ್ರಗ್ಸ್ ಕಂಟ್ರೋಲರ್ರನ್ನು ಅಮಾನತು ಆದೇಶ ನೀಡಿದ್ದು, ಆ ಕಂಪೆನಿಯನ್ನು ಬ್ಯ್ಲಾಕ್ಲಿಸ್ಟ್ಗೆ ಹಾಕುವಂತೆ ಹೇಳಿದ್ದೇನೆ. ಅಲ್ಲದೇ ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚಿಸಿದ್ದೇನೆ ಎಂದಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…