ರಾಜ್ಯ

ಬೆಂಗಳೂರು ಕಂಬಳಕ್ಕೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಲಾಗಿದ್ದು, ಈ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಅವರು 1 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್‌ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕರಾವಳಿಯ ಎಲ್ಲಾ ಸಮುದಾಯದವರು ಒಟ್ಟಾಗಿ ಸೇರುವ ಬೃಯತ್‌ ವೇದಿಕೆ ಇದಾಗಿದ್ದು, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಕಂಬಳ ಸಂಬಂಧ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ರಾಜಧಾನಿಯಲ್ಲಿ ಮೊದಲ ಬಾರಿಗೆ ಕಂಬಳ ನಡೆಯುತ್ತಿದ್ದು, ಸುಮಾರು 3 ರಿಂದ 5 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅರಮನೆ ಮೈದಾನದಲ್ಲಿ ಸುಮಾರು 70 ಎಕರೆ ಜಾಗದಲ್ಲಿ ಕಂಬಳ ನಡೆಯಲಿದೆ ಎಂದರು.

ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

11 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago