ರಾಜ್ಯ

ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಗಿಫ್ಟ್:‌ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಶಾಸಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯ ಮೂಲಗಳು ತಿಳಿಸಿವೆ.

ಶಾಸಕರಿಗೆ ಮುಖ್ಯಮಂತ್ರಿ ಅವರು ಬರೆದಿರುವ ಅನುದಾನ ಮಂಜೂರು ಮಾಡುವ ಕುರಿತ ಪತ್ರವನ್ನು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯವರ ಕಚೇರಿಯಲ್ಲಿ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕರ ಆಪ್ತಸಹಾಯಕರು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯ ಕಚೇರಿಯನ್ನು ಸಂಪರ್ಕಿಸಿ ಪತ್ರ ಪಡೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಂ ಪ್ರಭು ಪಾಟೀಲ್ ಅವರು ನಿರ್ದೇಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಮೂಲಗಳು ಹೇಳಿವೆ. ಈ ಮೂಲಕ ಅಸಮಾಧಾನಿತ ಶಾಸಕರ ಮನವೊಲಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

46 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

2 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

3 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

4 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

4 hours ago