ರಾಜ್ಯ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಕ್ರಮ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಹತ್ವದ ಘೋಷಣೆ ಮಾಡಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಮಾಡಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago