ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಗುರುವಾರ(ಜು.25)ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೃಹತ್ತಾದ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ. ಸಂವಿಧಾನ ರಕ್ಷಣೆ ಮಾಡುತ್ತೇನೆಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಸಂವಿಧಾನವನ್ನು ಭಕ್ಷಣೆ ಮಾಡಿದ್ದಾರೆ ಎಂದು ದೂರಿದರು.
ಈ ಹಗರಣಗಳ ಕುರಿತು ಮಾತನಾಡಲು ಸದನದಲ್ಲಿ ಅವಕಾಶ ನೀಡಿಲ್ಲ. ಸ್ಪೀಕರ್ ಕೂಡ ಕಾಂಗ್ರೆಸ್ ಕಡೆ ವಾಲಿರುವುದು ಸ್ಪಷ್ಟವಾಗಿದೆ. ವಿರೋಧ ಪಕ್ಷಕ್ಕೆ ಪ್ರಶ್ನೆ ಮಾಡುವ ಅಧಿಕಾರ ಇದೆ. ಆದರೆ ಅದನ್ನು ಮೊಟಕುಗೊಳಿಸಿ, ದಾಖಲೆಗಳನ್ನು ಕೊಡುತ್ತೇವೆಂಬ ಭಯದಿಂದ ಆಡಳಿತ ಪಕ್ಷ ಪಲಾಯನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾದಲ್ಲಿ ದಲಿತರ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೂಡ ದಲಿತರಿಗೆ ಸಂಬಂಧಿಸಿದೆ. ಇಷ್ಟೇ ಅಲ್ಲದೆ 25 ಸಾವಿರ ಕೋಟಿ ರೂಪಾಯಿಯನ್ನು ದಲಿತರಿಗೆ ನೀಡದೆ ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದಕ್ಕಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿ ಬದಲು ಅಧಿವೇಶನದಲ್ಲೇ ದಾಖಲೆಗಳನ್ನು ನೀಡಲಿ. ಆಗ ನಾವು ಅಲ್ಲೇ ಪ್ರಶ್ನೆ ಕೇಳಬಹುದಿತ್ತು. ಅದನ್ನು ಬಿಟ್ಟು ಹೇಡಿಯಂತೆ ಪಲಾಯನ ಮಾಡಿದ್ದಾರೆ ಎಂದು ದೂರಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…