ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಗುರುವಾರ(ಜು.25)ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೃಹತ್ತಾದ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ. ಸಂವಿಧಾನ ರಕ್ಷಣೆ ಮಾಡುತ್ತೇನೆಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಸಂವಿಧಾನವನ್ನು ಭಕ್ಷಣೆ ಮಾಡಿದ್ದಾರೆ ಎಂದು ದೂರಿದರು.
ಈ ಹಗರಣಗಳ ಕುರಿತು ಮಾತನಾಡಲು ಸದನದಲ್ಲಿ ಅವಕಾಶ ನೀಡಿಲ್ಲ. ಸ್ಪೀಕರ್ ಕೂಡ ಕಾಂಗ್ರೆಸ್ ಕಡೆ ವಾಲಿರುವುದು ಸ್ಪಷ್ಟವಾಗಿದೆ. ವಿರೋಧ ಪಕ್ಷಕ್ಕೆ ಪ್ರಶ್ನೆ ಮಾಡುವ ಅಧಿಕಾರ ಇದೆ. ಆದರೆ ಅದನ್ನು ಮೊಟಕುಗೊಳಿಸಿ, ದಾಖಲೆಗಳನ್ನು ಕೊಡುತ್ತೇವೆಂಬ ಭಯದಿಂದ ಆಡಳಿತ ಪಕ್ಷ ಪಲಾಯನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾದಲ್ಲಿ ದಲಿತರ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೂಡ ದಲಿತರಿಗೆ ಸಂಬಂಧಿಸಿದೆ. ಇಷ್ಟೇ ಅಲ್ಲದೆ 25 ಸಾವಿರ ಕೋಟಿ ರೂಪಾಯಿಯನ್ನು ದಲಿತರಿಗೆ ನೀಡದೆ ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದಕ್ಕಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿ ಬದಲು ಅಧಿವೇಶನದಲ್ಲೇ ದಾಖಲೆಗಳನ್ನು ನೀಡಲಿ. ಆಗ ನಾವು ಅಲ್ಲೇ ಪ್ರಶ್ನೆ ಕೇಳಬಹುದಿತ್ತು. ಅದನ್ನು ಬಿಟ್ಟು ಹೇಡಿಯಂತೆ ಪಲಾಯನ ಮಾಡಿದ್ದಾರೆ ಎಂದು ದೂರಿದರು.
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…