ರಾಜ್ಯ

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ: ಮೇಲ್ಮನವಿ ತಯಾರಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದಿದ್ದ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಇದ್ದ ತಡೆ ಆದೇಶ ತೆರವುಗೊಂಡಂತಾಗಿದೆ.

ಇಂದು ಈ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಇಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಲು ಹೋಗಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.

ಹೈಕೋರ್ಟ್‌ ತೀರ್ಪು ಪ್ರಕಟಿಸುತ್ತಿದ್ದಂತೆ ಸಚಿವರು ಹಾಗೂ ಶಾಸಕರ ದಂಡು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದು, ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಹೇಳಿದ್ದಾರೆ.

ಹೈಕೋರ್ಟ್‌ ತೀರ್ಪು ಹಾಗೂ ಮುಂದಿನ ಹೆಜ್ಜೆಯ ಕುರಿತು ಸಚಿವರು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು, ಇಂದು ನಡೆಯುವ ಎಲ್ಲಾ ಬೆಳವಣಿಗೆ ಬಗ್ಗೆ ಭಾರೀ ಕುತೂಹಲ ಮನೆಮಾಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

3 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

3 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

3 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

3 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

4 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

4 hours ago