ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದಿದ್ದ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಇದ್ದ ತಡೆ ಆದೇಶ ತೆರವುಗೊಂಡಂತಾಗಿದೆ.
ಇಂದು ಈ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಇಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಲು ಹೋಗಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ಹೈಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಸಚಿವರು ಹಾಗೂ ಶಾಸಕರ ದಂಡು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದು, ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ಹಾಗೂ ಮುಂದಿನ ಹೆಜ್ಜೆಯ ಕುರಿತು ಸಚಿವರು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು, ಇಂದು ನಡೆಯುವ ಎಲ್ಲಾ ಬೆಳವಣಿಗೆ ಬಗ್ಗೆ ಭಾರೀ ಕುತೂಹಲ ಮನೆಮಾಡಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…