ರಾಜ್ಯ

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

10 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

10 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

10 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

10 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

10 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

10 hours ago