ರಾಜ್ಯ

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

3 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

6 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

6 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

7 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

7 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

7 hours ago