ರಾಜ್ಯ

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದು, ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ. ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ, ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿನ್ನು ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಅವರು ಕೆಲಸ ಮಾಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

2 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

3 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

3 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

5 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

5 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

5 hours ago