ರಾಜ್ಯ

ಕಾವೇರಿ ನೀರು ಬಿಡುಗಡೆ ಸಂಬಂಧ ಜುಲೈ 14 ರಂದು ಸರ್ವಪಕ್ಷ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು(ಜು.೧೨) ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಸಿಡಬ್ಲ್ಯೂಆರ್‌ಸಿ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿಡಬ್ಲ್ಯೂಆರ್‌ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅಂತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.­

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago