ರಾಜ್ಯ

ಕಾವೇರಿ ನೀರು ಬಿಡುಗಡೆ ಸಂಬಂಧ ಜುಲೈ 14 ರಂದು ಸರ್ವಪಕ್ಷ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು(ಜು.೧೨) ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಸಿಡಬ್ಲ್ಯೂಆರ್‌ಸಿ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿಡಬ್ಲ್ಯೂಆರ್‌ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅಂತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.­

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

2 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

5 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

6 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

10 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

10 hours ago