Categories: ರಾಜ್ಯ

ಡಾಕ್ಟರ್, ಎಂಜಿನಿಯರಿಂಗ್ ವಿದ್ಯಾವಂತರಾದರೂ ಕಂದಾಚಾರ ಬಿಡೋದಿಲ್ಲ, ಇಂಥಾ ಶಿಕ್ಷಣ ಬೇಕಾ? ಸಿ‌ಎಂ.ಸಿದ್ದರಾಮಯ್ಯ

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ಬಸವಣ್ಣನವರು ಅಂದಿನ ಕಾಲದಲ್ಲೇ ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಆದರೆ ಇದೀಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಗೆ ಕೇವಲ ಶಿಕ್ಷಣ ಸಿಕ್ಕರೆ ಸಾಲದು, ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ತಿಳಿದುಕೊಳ್ಳಬೇಕು. ಇವೆರಡೂ ಇಲ್ಲದಿರುವ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯವಾಗಿದೆ. ಅನೇಕರು ಶಿಕ್ಷಣ ಪಡೆದಿರುತ್ತಾರೆ , ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾಗಿ ಮತ್ತು ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದರೆ ಅಂತಹ ಶಿಕ್ಷಣದಿಂದ ಏನು ಪ್ರಯೋಜನ. ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ಎಂದು ಹೇಳಿದರು.

ನಮ್ಮ ಜಾತಿಯವರಿಗೆ ವೋಟು ನೀಡಿ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಈಗಿನ ಕಾಲದಲ್ಲಿ ಹೇಳಿಕೊಳ್ಳೋಕೆ ಮಾತ್ರ ವಿದ್ಯಾವಂತರಾಗಿರುತ್ತಾರೆ. ಆದರೆ ಅವನು ನಮ್ಮ ಜಾತಿಯವನಲ್ಲ, ಅವನಿಗೆ ವೋಟು ನೀಡುವುದು ಬೇಡ. ಇವರು ನಮ್ಮ ಜಾತಿಯವರು ಇವರಿಗೆ ವೋಟು ನೀಡಿ ಎಂದು ಕೇಳುತ್ತಾರೆ. ಎಷ್ಟೇ ವಿದ್ಯಾವಂತ ವ್ಯಕ್ತಿಯಾಗಿದ್ದರೂ ಜಾತಿಯನ್ನು ನೋಡುತ್ತಾರೆ. ಅವರಿಗೆ ರಾಜಕೀಯ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ವೋಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

7 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

9 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

10 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

10 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

10 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

11 hours ago