Categories: ರಾಜ್ಯ

ಡಾಕ್ಟರ್, ಎಂಜಿನಿಯರಿಂಗ್ ವಿದ್ಯಾವಂತರಾದರೂ ಕಂದಾಚಾರ ಬಿಡೋದಿಲ್ಲ, ಇಂಥಾ ಶಿಕ್ಷಣ ಬೇಕಾ? ಸಿ‌ಎಂ.ಸಿದ್ದರಾಮಯ್ಯ

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ಬಸವಣ್ಣನವರು ಅಂದಿನ ಕಾಲದಲ್ಲೇ ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಆದರೆ ಇದೀಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಗೆ ಕೇವಲ ಶಿಕ್ಷಣ ಸಿಕ್ಕರೆ ಸಾಲದು, ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ತಿಳಿದುಕೊಳ್ಳಬೇಕು. ಇವೆರಡೂ ಇಲ್ಲದಿರುವ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯವಾಗಿದೆ. ಅನೇಕರು ಶಿಕ್ಷಣ ಪಡೆದಿರುತ್ತಾರೆ , ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾಗಿ ಮತ್ತು ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದರೆ ಅಂತಹ ಶಿಕ್ಷಣದಿಂದ ಏನು ಪ್ರಯೋಜನ. ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ಎಂದು ಹೇಳಿದರು.

ನಮ್ಮ ಜಾತಿಯವರಿಗೆ ವೋಟು ನೀಡಿ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಈಗಿನ ಕಾಲದಲ್ಲಿ ಹೇಳಿಕೊಳ್ಳೋಕೆ ಮಾತ್ರ ವಿದ್ಯಾವಂತರಾಗಿರುತ್ತಾರೆ. ಆದರೆ ಅವನು ನಮ್ಮ ಜಾತಿಯವನಲ್ಲ, ಅವನಿಗೆ ವೋಟು ನೀಡುವುದು ಬೇಡ. ಇವರು ನಮ್ಮ ಜಾತಿಯವರು ಇವರಿಗೆ ವೋಟು ನೀಡಿ ಎಂದು ಕೇಳುತ್ತಾರೆ. ಎಷ್ಟೇ ವಿದ್ಯಾವಂತ ವ್ಯಕ್ತಿಯಾಗಿದ್ದರೂ ಜಾತಿಯನ್ನು ನೋಡುತ್ತಾರೆ. ಅವರಿಗೆ ರಾಜಕೀಯ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ವೋಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

14 hours ago