Categories: ರಾಜ್ಯ

ಡಾಕ್ಟರ್, ಎಂಜಿನಿಯರಿಂಗ್ ವಿದ್ಯಾವಂತರಾದರೂ ಕಂದಾಚಾರ ಬಿಡೋದಿಲ್ಲ, ಇಂಥಾ ಶಿಕ್ಷಣ ಬೇಕಾ? ಸಿ‌ಎಂ.ಸಿದ್ದರಾಮಯ್ಯ

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ಬಸವಣ್ಣನವರು ಅಂದಿನ ಕಾಲದಲ್ಲೇ ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಆದರೆ ಇದೀಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಗೆ ಕೇವಲ ಶಿಕ್ಷಣ ಸಿಕ್ಕರೆ ಸಾಲದು, ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ತಿಳಿದುಕೊಳ್ಳಬೇಕು. ಇವೆರಡೂ ಇಲ್ಲದಿರುವ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯವಾಗಿದೆ. ಅನೇಕರು ಶಿಕ್ಷಣ ಪಡೆದಿರುತ್ತಾರೆ , ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾಗಿ ಮತ್ತು ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದರೆ ಅಂತಹ ಶಿಕ್ಷಣದಿಂದ ಏನು ಪ್ರಯೋಜನ. ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ಎಂದು ಹೇಳಿದರು.

ನಮ್ಮ ಜಾತಿಯವರಿಗೆ ವೋಟು ನೀಡಿ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಈಗಿನ ಕಾಲದಲ್ಲಿ ಹೇಳಿಕೊಳ್ಳೋಕೆ ಮಾತ್ರ ವಿದ್ಯಾವಂತರಾಗಿರುತ್ತಾರೆ. ಆದರೆ ಅವನು ನಮ್ಮ ಜಾತಿಯವನಲ್ಲ, ಅವನಿಗೆ ವೋಟು ನೀಡುವುದು ಬೇಡ. ಇವರು ನಮ್ಮ ಜಾತಿಯವರು ಇವರಿಗೆ ವೋಟು ನೀಡಿ ಎಂದು ಕೇಳುತ್ತಾರೆ. ಎಷ್ಟೇ ವಿದ್ಯಾವಂತ ವ್ಯಕ್ತಿಯಾಗಿದ್ದರೂ ಜಾತಿಯನ್ನು ನೋಡುತ್ತಾರೆ. ಅವರಿಗೆ ರಾಜಕೀಯ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ವೋಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

55 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

59 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago