ರಾಜ್ಯ

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.

ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ.

ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.

ಆಯಾ ಇಲಾಖೆಗಳಿಂದ 2026- 27ನೇ ಸಾಲಿಗೆ ಘೋಷಿಸಬೇಕಾದ ಹೊಸ ಯೋಜನೆಗಳ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಹಿಂದಿನ ಬಜೆಟ್ಟಿನಲ್ಲಿ ಘೋಷಿಸಲಾದ, ಅನುದಾನ, ಬಿಡುಗಡೆಯಾಗಿರುವುದು, ಮತ್ತು ವೆಚ್ಚವಾಗಿರುವ ಹಣದ ಬಗ್ಗೆ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು, ಬಜೆಟ್ ನಲ್ಲಿ ಅವುಗಳ ಘೋಷಣೆ ಮತ್ತು ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಚರ್ಚಿಸಲಾಗಿದೆ. ಬಜೆಟ್‌ನಲ್ಲಿ ಈ ಮೊದಲು ಘೋಷಿಸಲಾದ ಯೋಜನೆಗಳ ಕಾರ್ಯಾನುಷ್ಠಾನದ ಬಗ್ಗೆಯೂ ಚರ್ಚೆಯಾಗಿದೆ. ಬಜೆಟ್ ಕಾರ್ಯಕ್ರಮಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಧಿಕಾರಿಗಳು ಅದನ್ನು ಬಜೆಟ್ ಅಂಗೀಕಾರಗೊಂಡ ಎರಡು ತಿಂಗಳ ಒಳಗಾಗಿ ಕಾರ್ಯಾದೇಶಗಳನ್ನು ಹೊರಡಿಸಬೇಕು ಎಂದು ಸೂಚಿಸಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

1 hour ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

1 hour ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

2 hours ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

2 hours ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

2 hours ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

3 hours ago