ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.
ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ.
ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಆಯಾ ಇಲಾಖೆಗಳಿಂದ 2026- 27ನೇ ಸಾಲಿಗೆ ಘೋಷಿಸಬೇಕಾದ ಹೊಸ ಯೋಜನೆಗಳ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಹಿಂದಿನ ಬಜೆಟ್ಟಿನಲ್ಲಿ ಘೋಷಿಸಲಾದ, ಅನುದಾನ, ಬಿಡುಗಡೆಯಾಗಿರುವುದು, ಮತ್ತು ವೆಚ್ಚವಾಗಿರುವ ಹಣದ ಬಗ್ಗೆ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು, ಬಜೆಟ್ ನಲ್ಲಿ ಅವುಗಳ ಘೋಷಣೆ ಮತ್ತು ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಚರ್ಚಿಸಲಾಗಿದೆ. ಬಜೆಟ್ನಲ್ಲಿ ಈ ಮೊದಲು ಘೋಷಿಸಲಾದ ಯೋಜನೆಗಳ ಕಾರ್ಯಾನುಷ್ಠಾನದ ಬಗ್ಗೆಯೂ ಚರ್ಚೆಯಾಗಿದೆ. ಬಜೆಟ್ ಕಾರ್ಯಕ್ರಮಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಧಿಕಾರಿಗಳು ಅದನ್ನು ಬಜೆಟ್ ಅಂಗೀಕಾರಗೊಂಡ ಎರಡು ತಿಂಗಳ ಒಳಗಾಗಿ ಕಾರ್ಯಾದೇಶಗಳನ್ನು ಹೊರಡಿಸಬೇಕು ಎಂದು ಸೂಚಿಸಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…