ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಕೂಗು ಎದ್ದಿದೆ.
ಒಂದೆಡೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಕೂಡ ಗುಸು ಗುಸು ಎನ್ನುತ್ತಿವೆ.
ಇದೆಲ್ಲದರ ಜೊತೆಗೆ ಹೆಚ್ಚುವರಿ ಡಿಸಿಎಂಗಳ ನೇಮಕ ಮಾಡಬೇಕು ಎಂಬ ಬಗ್ಗೆಯೂ ಆಡಳಿತರೂಢ ಕಾಂಗ್ರೆಸ್ನಲ್ಲೇ ಆಗ್ರಹ ಕೇಳಿ ಬಂದಿದೆ. ಈಗ ದೆಹಲಿ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ತನ್ನ ಆಪ್ತರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗಾದಿ ಕೊಡಿಸಲು ಸಿಎಂ ಸಿದ್ದರಾಮಯ್ಯ ಭಾರೀ ಷಡ್ಯಂತ್ರ ರೂಪಿಸಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿರುವ ಹಿನ್ನೆಲೆಯಲ್ಲಿ ತನ್ನ ಆಪ್ತರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡ ಸಚಿವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಮುಂದೆ ಇರಿಸಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಆಪ್ತ ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್ ಖಂಡ್ರೆ ಪೈಕಿ ಯಾರಾದರೂ ಒಬ್ಬರ ಹೆಸರನ್ನು ಪ್ರಸ್ತಾಪಿಸಲು ಸಿಎಂ ಸಿದ್ದು ಒಲವು ತೋರಿಸಿದ್ದಾರೆ ಎನ್ನಲಾಗಿದೆ.
ಒಂದೊಂದು ಕೋಟಾದ ಒಬ್ಬೊಬ್ಬ ಸಚಿವರ ಹೆಸರು ಪ್ರಸ್ತಾಪಿಸಲು ಸಿದ್ದರಾಮಯ್ಯ ಸಕತ್ ಪ್ಲಾನ್ ರೂಪಿಸಿದ್ದು, ಅಹಿಂದ ಕೋಟಾದಡಿ ಸಚಿವ ಸತೀಶ್ ಜಾರಕಿಹೊಳಿ, ವೀರಶೈವ ಲಿಂಗಾಯತ ಕೋಟಾದಡಿ ಸಚಿವ ಎಂ.ಬಿ.ಪಾಟೀಲ್ ಅಥವಾ ಸಚಿವ ಈಶ್ವರ್ ಖಂಡ್ರೆ ಹೆಸರನ್ನು ಶಿಫಾರಸ್ಸು ಮಾಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಈಗ ಎಲ್ಲೆಡೆ ಹರಿದಾಡುತ್ತಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…