ರಾಜ್ಯ

ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ

ಬೆಳಗಾವಿ: ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಸುಳ್ಳು ದಾಖಲೆ ಸೃಷ್ಟಿಸಿ ನಿವೇಶನ ಪಡೆದಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಉತ್ತರಿಸುತ್ತಾ, ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ. ಶ್ರೀ ದೇವರಾಜು ರವರಿಂದ ನನ್ನ ಬಾವಮೈದುನ 2004 ರಲ್ಲಿ ಜಮೀನನ್ನು ಪಡೆದಿದ್ದು, 2005 ರಲ್ಲಿ ಅದನ್ನು ಪರಿವರ್ತಿಸಲಾಗಿ, 2010 ರಲ್ಲಿ ಅವರಿಂದ ನನ್ನ ಪತ್ನಿಗೆ ಆ ಜಮೀನನ್ನು ದಾನವಾಗಿ ಬಂದಿದೆ. ಆದರೆ ಮುಡಾ ದವರು ನನ್ನ ಪತ್ನಿಯ ಗಮನಕ್ಕೆ ತಾರದೇ ಆ ಜಮೀನನ್ನು ನಿವೇಶನವಾಗಿ ಪರಿವರ್ತಿಸಿ ಹಂಚಿಕೆ ಮಾಡಿದ್ದಾರೆ.

ಆ ಸಂದರ್ಭದಲ್ಲಿ ಬಿಜೆಪಿಯವರೇ ಮುಡಾದ ಅಧ್ಯಕ್ಷರಾಗಿದ್ದರು. ಈ ಹಂಚಿಕೆ ಕಾನೂನು ರೀತ್ಯ ಇದೆಯೇ, ಇಲ್ಲವೇ ಎಂದು ಪರಿಶೀಲಿಸುವ ಜವಾಬ್ದಾರಿಯೂ ಅವರದೇ ಆಗಿದೆ. ಇದರಲ್ಲಿ ಎಲ್ಲವೂ ಕಾನೂನಾತ್ಮಕವಾಗಿ ಸರಿಯಿದೆ ಎಂಬುದು ನಮ್ಮ ಭಾವನೆ. ನಮ್ಮ ಭಾಗದ 3 ಎಕರೆ 16 ಗುಂಟೆ ಜಮೀನು ಹೋಗಿದ್ದು, ನಮ್ಮ ಗಮನಕ್ಕೆ ತಾರದೇ ನಿವೇಶನ ಮಾಡಿ ಹಂಚಿದರೆ ನಾವೇನು ಮಾಡಬೇಕು ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

ನನ್ನ ವಿರುದ್ಧ ದಾಖಲೆಗಳಿದ್ದರೆ ಸಲ್ಲಿಸಲಿ: ಈ ಜಮೀನು ಕುಮಾರಸ್ವಾಮಿಯವರಿಗೆ ಸೇರಿದ್ದಲ್ಲ. ಆದರೆ ಈ ಬಗ್ಗೆ ಅವರೇಕೆ ಸುಳ್ಳು ಹೇಳಬೇಕು ? ಈ ಬಗ್ಗೆ ಸರ್ಕಾರ ಒಂದು ವಿಶೇಷ ತನಿಖಾ ಆಯೋಗವನ್ನು ರಚಿಸಿದ್ದು, ಕುಮಾರಸ್ವಾಮಿಯವರ ಬಳಿ ಈ ಬಗ್ಗೆ ದಾಖಲೆಗಳೇನಾದರೂ ಇದ್ದರೆ ಅವರು ಸಲ್ಲಿಸಲಿ ಎಂದರು.

ಕುಮಾರಸ್ವಾಮಿಯವರ ಯಾವುದೇ ಆರೋಪ ತಾರ್ಕಿಕ ಅಂತ್ಯ ಕಂಡಿಲ್ಲ: ನೂರು ಸಿದ್ದರಾಮಯ್ಯನವರು ಬಂದರೂ, ನನ್ನನ್ನು ಜೈಲಿಗೆ ಕಳಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿಯವರನ್ನು ನಾನು ಜೈಲಿಗೆ ಕಳಿಸುತ್ತೇನೆ ಎಂದು ನಾನು ಹೇಳಿರುವುದಿಲ್ಲ ಹಾಗೂ ಅಂತಹ ಯಾವುದೇ ಉದ್ದೇಶ ನಮಗಿಲ್ಲ. ಆದರೆ ಕಾನೂನು ಉಲ್ಲಂಘಿಸಿದರೆ , ನ್ಯಾಯಾಲಯವೇ ಜೈಲಿಗೆ ಕಳಿಸುತ್ತದೆ. ಅಂತಹ ಸಂದರ್ಭ ಬಂದಾಗ, ಕುಮಾರಸ್ವಾಮಿಯವರನ್ನು ಬಂಧಿಸಲು ನೂರು ಸಿದ್ದರಾಮಯ್ಯ ಅಲ್ಲ , ಒಬ್ಬ ಪೊಲೀಸ್ ಪೇದೆ ಸಾಕು. ಕುಮಾರಸ್ವಾಮಿಯವರು ಎಂದಿಗೂ ಹಿಟ್ ಅಂಡ್ ರನ್ ಕೇಸ್ ಆಗಿದ್ದು, ಅವರು ಈವರೆಗೆ ಮಾಡಿರುವ ಯಾವುದೇ ಆರೋಪ ತಾರ್ಕಿಕ ಅಂತ್ಯವನ್ನು ಕಂಡಿಲ್ಲ ಎಂದು ತಿಳಿಸಿದರು.

ಹಿರಿಯ ಜೀವ ಅಕ್ಕಾತಾಯಿ ಅವರ ಕಾರ್ಯಕ್ಕೆ ಸಂತಸ: ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬುವರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಕಳೆದ ಹತ್ತು ತಿಂಗಳಿನಿಂದ ಮಾಹೆಯಾನ 2,000 ರೂ. ದೊರೆಯುತ್ತಿದೆ. ಅಕ್ಕಾತಾಯಿ ಎಂಬ ಹಿರಿಯ ಮಹಿಳೆ ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಉಳಿತಾಯ ಮಾಡಿ, ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿದ್ದನ್ನು ಪ್ರಶಂಸಿಸಿದ ಮುಖ್ಯಮಂತ್ರಿಗಳೂ ಹೋಳಿಗೆಯ ರುಚಿಯನ್ನು ಸವಿದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಸದಾ ಅಧಿಕಾರದಲ್ಲಿದ್ದು ,ಒಳಿತಾಗಲೆಂದು ಪ್ರಾರ್ಥಿಸಿ ಈ ಕಾರ್ಯ ಮಾಡಿದ್ದಾಗಿ ತಿಳಿದು ಮನತುಂಬಿ ಬಂತು. ಈ ಹಿರಿಯ ಜೀವದ ನಿಸ್ವಾರ್ಥ ಕಾರ್ಯವನ್ನು ಶ್ಲಾಘಿಸಿ, ಅವರಿಗೆ ಸನ್ಮಾನಿಸಿ ಗೌರವ ಸೂಚಿಸಲಾಗಿದೆ ಎಂದರು.ಸಂಗೊಳ್ಳಿಯ ಶಕ್ತಿ ಯೋಜನೆಯ ಫಲಾನುಭವಿಯನ್ನು ಇದೇ ರೀತಿ ಸನ್ಮಾನಿಸಿದ್ದನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು.

ಕಿತ್ತೂರು ಉತ್ಸವದ ಸಿದ್ದತೆ: ಕಿತ್ತೂರು ಉತ್ಸವ ಆಯೋಜನೆಯ ಬಗ್ಗೆ ಪ್ರತಿಕ್ರಿಯೇ ನೀಡಿ, ಕಿತ್ತೂರು ಉತ್ಸವ ಏರ್ಪಡಿಸಲಾಗಿದ್ದು, ಈ ನಿಟ್ಟಿನಲ್ಲಿ ಸಿದ್ದತೆ ನಡೆದಿರುವುದಾಗಿ ತಿಳಿಸಿದರು.

ರಾಜ್ಯಪಾಲರಿಂದ ವಾಪಸ್ಸು ಬಂದಿರುವ ಬಿಲ್ಲುಗಳ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

47 seconds ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

6 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

19 mins ago

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

27 mins ago

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

2 hours ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

2 hours ago