ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.
ನಿವೇಶನ ನೀಡಿದಾಗ 2021 ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ಕೇವಲ ರಾಜಕೀಯ ಪ್ರೇರಿತ ಆಪಾದನೆಯಷ್ಟೆ ಎಂದು ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…