ರಾಜ್ಯ

ನಕ್ಸಲರಿಗೆ ಕಾನೂನಾತ್ಮಕ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಕರೆ: ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗತಿಗೆ ತೀರ್ಮಾನ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ ಹಾಗೂ ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಈ ಕರೆಯ ಬೆನ್ನಲ್ಲೇ ದಕ್ಷಿಣ ಭಾರತದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಜೀಶ, ಕರ್ನಾಟಕದ ನಕ್ಸಲ್‌ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ ಹಾಗೂ ಆಂಧ್ರ ಪ್ರದೇಶದ ಕೆ.ವಸಂತ ಮತ್ತು ಮಾರೆಪ್ಪ ಅರೋಲಿ ಶರಣಾಗತಿಗೆ ತೀರ್ಮಾನಿಸಿದ್ದು, ಇನ್ನು ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.

ಈ ಕುರಿತು ನಕ್ಸಲರು ತಮ್ಮ ಶಾಂತಿಗಾಗಿ ಬೇಡಿಕೆಗಳನ್ನಿಟ್ಟು, ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಗರೀಕ ವೇದಿಕೆಯ ಸದಸ್ಯರು ಚರ್ಚಿಸಲಿದ್ದಾರೆ.

ನಕ್ಸಲರ ಬೇಡಿಕೆಗಳೇನು?

1. ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯೂ ಘನತೆಯುತವಾಗಿರಬೇಕು ಮತ್ತು ತಮ್ಮ ಆತ್ಮ ಗೌರವಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಅಡ್ಡಿಯಾಗಬಾರದು.

2. ನಕ್ಸಲರು ಹೊರಬಂದ ಬಳಿಕ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಗೊಳಿಸಬೇಕು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸಬೇಕು.

3. ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಅವರು ಹೊರಬಂದ ಬಳಿಕ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು.

4. ಅವರ ಎಲ್ಲಾ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಅವಕಾಶ ನೀಡಬೇಕು.

5. ವಿಕ್ರಮ್‌ ಗೌಡ ಅವರ ಎನ್‌ಕೌಂಟರ್‌ ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.

6. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಹಲವು ನಕ್ಸಲರ ಜೀವನ ಅಂತ್ರವಾಗಿದ್ದು, ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಸಹ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡುವ ಮೂಲಕ ಅವರ ಬಿಡುಗಡೆಗೆ ಸಹಕರಿಸಬೇಕು.

7. ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶದ ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago