ರಾಜ್ಯ

ನಕ್ಸಲರಿಗೆ ಕಾನೂನಾತ್ಮಕ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಕರೆ: ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗತಿಗೆ ತೀರ್ಮಾನ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ ಹಾಗೂ ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಈ ಕರೆಯ ಬೆನ್ನಲ್ಲೇ ದಕ್ಷಿಣ ಭಾರತದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಜೀಶ, ಕರ್ನಾಟಕದ ನಕ್ಸಲ್‌ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ ಹಾಗೂ ಆಂಧ್ರ ಪ್ರದೇಶದ ಕೆ.ವಸಂತ ಮತ್ತು ಮಾರೆಪ್ಪ ಅರೋಲಿ ಶರಣಾಗತಿಗೆ ತೀರ್ಮಾನಿಸಿದ್ದು, ಇನ್ನು ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.

ಈ ಕುರಿತು ನಕ್ಸಲರು ತಮ್ಮ ಶಾಂತಿಗಾಗಿ ಬೇಡಿಕೆಗಳನ್ನಿಟ್ಟು, ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಗರೀಕ ವೇದಿಕೆಯ ಸದಸ್ಯರು ಚರ್ಚಿಸಲಿದ್ದಾರೆ.

ನಕ್ಸಲರ ಬೇಡಿಕೆಗಳೇನು?

1. ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯೂ ಘನತೆಯುತವಾಗಿರಬೇಕು ಮತ್ತು ತಮ್ಮ ಆತ್ಮ ಗೌರವಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಅಡ್ಡಿಯಾಗಬಾರದು.

2. ನಕ್ಸಲರು ಹೊರಬಂದ ಬಳಿಕ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಗೊಳಿಸಬೇಕು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸಬೇಕು.

3. ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಅವರು ಹೊರಬಂದ ಬಳಿಕ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು.

4. ಅವರ ಎಲ್ಲಾ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಅವಕಾಶ ನೀಡಬೇಕು.

5. ವಿಕ್ರಮ್‌ ಗೌಡ ಅವರ ಎನ್‌ಕೌಂಟರ್‌ ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.

6. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಹಲವು ನಕ್ಸಲರ ಜೀವನ ಅಂತ್ರವಾಗಿದ್ದು, ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಸಹ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡುವ ಮೂಲಕ ಅವರ ಬಿಡುಗಡೆಗೆ ಸಹಕರಿಸಬೇಕು.

7. ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶದ ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

12 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

14 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

16 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

16 hours ago