ರಾಜ್ಯ

ನಕ್ಸಲರಿಗೆ ಕಾನೂನಾತ್ಮಕ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಕರೆ: ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗತಿಗೆ ತೀರ್ಮಾನ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ ಹಾಗೂ ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಈ ಕರೆಯ ಬೆನ್ನಲ್ಲೇ ದಕ್ಷಿಣ ಭಾರತದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಜೀಶ, ಕರ್ನಾಟಕದ ನಕ್ಸಲ್‌ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ ಹಾಗೂ ಆಂಧ್ರ ಪ್ರದೇಶದ ಕೆ.ವಸಂತ ಮತ್ತು ಮಾರೆಪ್ಪ ಅರೋಲಿ ಶರಣಾಗತಿಗೆ ತೀರ್ಮಾನಿಸಿದ್ದು, ಇನ್ನು ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.

ಈ ಕುರಿತು ನಕ್ಸಲರು ತಮ್ಮ ಶಾಂತಿಗಾಗಿ ಬೇಡಿಕೆಗಳನ್ನಿಟ್ಟು, ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಗರೀಕ ವೇದಿಕೆಯ ಸದಸ್ಯರು ಚರ್ಚಿಸಲಿದ್ದಾರೆ.

ನಕ್ಸಲರ ಬೇಡಿಕೆಗಳೇನು?

1. ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯೂ ಘನತೆಯುತವಾಗಿರಬೇಕು ಮತ್ತು ತಮ್ಮ ಆತ್ಮ ಗೌರವಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಅಡ್ಡಿಯಾಗಬಾರದು.

2. ನಕ್ಸಲರು ಹೊರಬಂದ ಬಳಿಕ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಗೊಳಿಸಬೇಕು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸಬೇಕು.

3. ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಅವರು ಹೊರಬಂದ ಬಳಿಕ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು.

4. ಅವರ ಎಲ್ಲಾ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಅವಕಾಶ ನೀಡಬೇಕು.

5. ವಿಕ್ರಮ್‌ ಗೌಡ ಅವರ ಎನ್‌ಕೌಂಟರ್‌ ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.

6. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಹಲವು ನಕ್ಸಲರ ಜೀವನ ಅಂತ್ರವಾಗಿದ್ದು, ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಸಹ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡುವ ಮೂಲಕ ಅವರ ಬಿಡುಗಡೆಗೆ ಸಹಕರಿಸಬೇಕು.

7. ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶದ ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago