ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ” ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆಯೀಗ ವರ್ಷ ಪೂರೈಸಿದೆ.
ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ” ಎಂದು ಬರೆದುಕೊಂಡಿದ್ದಾರೆ.
ಇದರ ಜೊತೆಗೆ ಕೆಲವು ಪೋಸ್ಟರ್ಗಳನ್ನು ಹಂಚಿಕೊಂಡಿದ್ದು, ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಯೋಜನೆ, ಸೊಸೆಗೆ ಬದುಕು ಕಟ್ಟಿಕೊಡಲು ಅತ್ತೆಗೆ ಆಸರೆಯಾದ ಗೃಹಲಕ್ಷ್ಮಿ ಯೋಜನೆ, ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿ ಸಂಭ್ರಮಿಸಿದ ಅಜ್ಜಿ, ಗೃಹಲಕ್ಷ್ಮಿ ಹಣದಿಂದ ಮೊಬೈಲ್ ಖರೀದಿಸಿ, ಸಿಎಂ ಫೋಟೋ ವಾಲ್ಪೇಪರ್ನಲ್ಲಿರಿಸಿ ಸಂಭ್ರಮಿಸಿದ ಮಹಿಳೆ ಹೀಗೆ ಹತ್ತು ಹಲವು ಕಥೆಗಳ ಪೋಸ್ಟ್ಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ವರ್ಷದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
2023ರ ಆಗಸ್ಟ್ 30ರಂದು ಮೈಸೂರಿನಲ್ಲಿ ಸಿಎಂ ಗೃಹಲಕ್ಷ್ಮಿ ಯೋಜನಗೆ ಚಾಲನೆ ನೀಡಿದ್ದರು. ಅದರಂತೆ ಮನೆ ಒಡತಿಯ ಖಾತೆಗೆ ಪ್ರತೀ ತಿಂಗಳು 2 ಸಾವಿರ ಹಣ ಹಾಕುವುದಾಗಿ ಸಿಎಂ ಹೇಳಿದ್ದರು.
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…
ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…
ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…
ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…