ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರು ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು ಎಂದು ತಿಳಿಸಿದ್ದಾರೆ.
ಅಸ್ಸಾದಿ ಅವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯವಾಗಿದ್ದರು.
ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…
ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…
ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…
ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…
ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…