ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರು ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು ಎಂದು ತಿಳಿಸಿದ್ದಾರೆ.
ಅಸ್ಸಾದಿ ಅವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯವಾಗಿದ್ದರು.
ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…