ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರು ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು ಎಂದು ತಿಳಿಸಿದ್ದಾರೆ.
ಅಸ್ಸಾದಿ ಅವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯವಾಗಿದ್ದರು.
ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…